"ಮನುಷ್ಯ ದೀಪವಾದರೂ ಆಗಬೇಕು, ಕನ್ನಡಿಯಾದರೂ ಆಗಬೇಕು. ಒಂದು ಬೆಳಕನ್ನು ಕೊಡುತ್ತದೆ ಮತ್ತೊಂದು ಅದನ್ನು ಪ್ರತಿಬಿಂಬಿಸುತ್ತದೆ. ಪ್ರತಿಯೊಬ್ಬರೂ ದೀಪ ಆಗದೇ ಹೋಗಬಹುದು ಆದರೆ ಕನ್ನಡಿ ಆಗಬಲ್ಲರು. ತಿಳಿದಿರುವ ಜ್ಞಾನವನ್ನು ಮತ್ತೊಬ್ಬರಿಗೆ ಹಂಚುವುದೇ ಜೀವನ.."—ಅರಿಸ್ಟಾಟಲ್

Sunday 1 December 2013

ಸುಗ್ರೀವಾಜ್ಞೆ (Ordinance) :

ಸುಗ್ರೀವಾಜ್ಞೆ (Ordinance) : --

ಇದೊಂದು ಕಾನೂನು ಆದೇಶ. ರಾಜ್ಯಪಾಲರು, ರಾಷ್ಟ್ರಪತಿಗಳು ಈ ರೀತಿಯ ಆದೇಶ ಹೊರಡಿಸುವ ಅಧಿಕಾರ ಹೊಂದಿರುತ್ತಾರೆ. ಭಾರತದ ಸಂವಿಧಾನದ ಪ್ರಕಾರ ಕಾನೂನು ರಚಿಸುವ ಅಧಿಕಾರ ಇರುವುದು ಶಾಸನ ಸಭೆಗೆ. ಅದು ಬಿಟ್ಟರೆ ತುರ್ತು ಸಂಧರ್ಭಗಳಲ್ಲಿ ರಾಷ್ಟ್ರಪತಿ ಅಥವಾ ರಾಜ್ಯಪಾಲರಿಗೆ ಈ ರೀತಿಯ ಆದೇಶಗಳನ್ನು ನೀಡುವ ವಿಶೇಷ ಅಧಿಕಾರ ನೀಡಲಾಗಿದೆ. ಆದರೆ ಈ ರೀತಿಯ ಸುಗ್ರೀವಾಜ್ಞೆಗಳನ್ನು ತುರ್ತು ಸಂಧರ್ಭದಲ್ಲಿ ಮಾತ್ರ ಹೊರಡಿಸಬಹುದು ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ. ಶಾಸನಸಭೆ ನಡೆಯುತ್ತಿದ್ದ ವೇಳೆ ಸುಗ್ರೀವಾಜ್ಞೆ ಹೊರಡಿಸಲು ರಾಷ್ಟ್ರಪತಿ, ರಾಜ್ಯಪಾಲರಿಗೆ ಅಧಿಕಾರವಿಲ್ಲ.

No comments:

Post a Comment