"ಮನುಷ್ಯ ದೀಪವಾದರೂ ಆಗಬೇಕು, ಕನ್ನಡಿಯಾದರೂ ಆಗಬೇಕು. ಒಂದು ಬೆಳಕನ್ನು ಕೊಡುತ್ತದೆ ಮತ್ತೊಂದು ಅದನ್ನು ಪ್ರತಿಬಿಂಬಿಸುತ್ತದೆ. ಪ್ರತಿಯೊಬ್ಬರೂ ದೀಪ ಆಗದೇ ಹೋಗಬಹುದು ಆದರೆ ಕನ್ನಡಿ ಆಗಬಲ್ಲರು. ತಿಳಿದಿರುವ ಜ್ಞಾನವನ್ನು ಮತ್ತೊಬ್ಬರಿಗೆ ಹಂಚುವುದೇ ಜೀವನ.."—ಅರಿಸ್ಟಾಟಲ್

Thursday 9 October 2014

ಈ ಬಾರಿ (2015) ಯ ರಸಾಯನ­ಶಾಸ್ತ್ರ ನೊಬೆಲ್‌ ಪ್ರಶಸ್ತಿಗೆ ಆಯ್ಕೆ­ಯಾದ ಮೂವರು ವಿಜ್ಞಾನಿಗಳು

★ ಈ ಬಾರಿ (2015) ಯ ರಸಾಯನ­ಶಾಸ್ತ್ರ ನೊಬೆಲ್‌ ಪ್ರಶಸ್ತಿಗೆ ಆಯ್ಕೆ­ಯಾದ ಮೂವರು ವಿಜ್ಞಾನಿಗಳು

—‘ಸೂಕ್ಷ್ಮದರ್ಶಕದ ದೃಷ್ಟಿಯನ್ನು ತೀಕ್ಷ್ಣ’ಗೊಳಿಸಿದ ಮೂವರು ವಿಜ್ಞಾನಿ­ಗಳು ಈ ಬಾರಿಯ ರಸಾಯನ­ಶಾಸ್ತ್ರ ನೊಬೆಲ್‌ ಪ್ರಶಸ್ತಿಗೆ ಆಯ್ಕೆ­ಯಾಗಿದ್ದಾರೆ.ಅಮೆರಿಕದ ಎರಿಕ್‌ ಬೆಟ್ಜಿಗ್‌ ಮತ್ತು ವಿಲಿಯಂ ಮೊಯೆರ್ನರ್‌ ಹಾಗೂ ಜರ್ಮನಿಯ ಸ್ಟಿಫನ್‌ ಹೆಲ್‌ ಈ ಗೌರ­ವಕ್ಕೆ ಪಾತ್ರರಾದವರು.ಈ ವಿನಿಗಳು ಅಭಿವೃದ್ಧಿಪಡಿಸಿದ ಸೂಕ್ಷ್ಮ­­­ದರ್ಶಕವು ಸಾಂಪ್ರದಾಯಿಕ ದ್ಯುತಿ­ಸೂಕ್ಷ್ಮ­ದರ್ಶಕದ ದೃಷ್ಟಿ ಸಾಮರ್ಥ್ಯದ ಮಿತಿಯನ್ನು ವಿಸ್ತರಿಸಿದೆ ಎಂದು ದಿ ರಾಯಲ್‌ ಸ್ವೀಡಿಸ್‌ ಅಕಾ­ಡೆಮಿ ಹೇಳಿದೆ.

‘ಸಾಂಪ್ರದಾಯಿಕ ದ್ಯುತಿ ಸೂಕ್ಷ್ಮ­ದರ್ಶ­ಕ­ದಿಂದ ಸೂಕ್ಷ್ಮಾತಿಸೂಕ್ಷ್ಮ ಕಣಗಳನ್ನು ನೋಡಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಈ ವಿಜ್ಞಾನಿಗಳ ಆವಿಷ್ಕಾರದಿಂದಾಗಿ ಇದೇ ಸೂಕ್ಷ್ಮದರ್ಶಕಗಳನ್ನು ಬಳಸಿ ನ್ಯಾನೊ ಕಣಗಳನ್ನೂ ನೋಡಲು ಸಾಧ್ಯ­ವಾಗಿದೆ’ ಎಂದು ಸ್ವೀಡಿಸ್‌ ಅಕಾಡೆಮಿ ತಿಳಿಸಿದೆ.
(ಕೃಪೆ: ಪ್ರಜಾವಾಣಿ) 

No comments:

Post a Comment