"ಮನುಷ್ಯ ದೀಪವಾದರೂ ಆಗಬೇಕು, ಕನ್ನಡಿಯಾದರೂ ಆಗಬೇಕು. ಒಂದು ಬೆಳಕನ್ನು ಕೊಡುತ್ತದೆ ಮತ್ತೊಂದು ಅದನ್ನು ಪ್ರತಿಬಿಂಬಿಸುತ್ತದೆ. ಪ್ರತಿಯೊಬ್ಬರೂ ದೀಪ ಆಗದೇ ಹೋಗಬಹುದು ಆದರೆ ಕನ್ನಡಿ ಆಗಬಲ್ಲರು. ತಿಳಿದಿರುವ ಜ್ಞಾನವನ್ನು ಮತ್ತೊಬ್ಬರಿಗೆ ಹಂಚುವುದೇ ಜೀವನ.."—ಅರಿಸ್ಟಾಟಲ್

Sunday 8 March 2015

☀ ನವ್ಯ ಕನ್ನಡ ಸಾಹಿತ್ಯ

☀ ನವ್ಯ ಕನ್ನಡ ಸಾಹಿತ್ಯ
━━━━━━━━━━━━━━━━━━━━━━━━━━━━━━━━━━━━━━━━━━━━━

●.ನವ್ಯ ಕನ್ನಡ ಸಾಹಿತ್ಯ

— ೧೯೪೭ ರ ಭಾರತದ ಸ್ವಾತಂತ್ರ್ಯಾನಂತರ ಕನ್ನಡ ಸಾಹಿತ್ಯದಲ್ಲಿ ಇನ್ನೊಂದು ಹೊಸ ಸಾಹಿತ್ಯ ಪ್ರಕಾರದ ಉಗಮವಾಯಿತು: ನವ್ಯ.

●.ಈ ಪ್ರಕಾರದ ಪಿತರೆಂದರೆ ಗೋಪಾಲಕೃಷ್ಣ ಅಡಿಗರು. ನವ್ಯ ಕವಿಗಳು ನಿರಾಶಾವಾದಿ ಬುದ್ಧಿಜೀವಿಗಳಿಗಾಗಿ ಹಾಗೂ ನಿರಾಶಾವಾದಿ ಬುದ್ಧಿಜೀವಿಗಳಂತೆ ಕಾವ್ಯ ರಚಿಸಿದರು.

—ಭಾಷಾಪ್ರಯೋಗದ ಚಮತ್ಕಾರ ಹಾಗೂ ಕಾವ್ಯತಂತ್ರ ಹೊಸ ಎತ್ತರವನ್ನು ಈ ಪ್ರಕಾರದಲ್ಲಿ ಕಂಡಿತು.


●.ಇತರ ಪ್ರಕಾರಗಳು

— ಕಳೆದ ಐದು ದಶಕಗಳಲ್ಲಿ ಕನ್ನಡ ಸಾಹಿತ್ಯದ ದಾರಿ ಸಾಮಾಜಿಕ ವಿಷಯಗಳನ್ನು ಕುರಿತದ್ದಾಗಿದೆ.

— ಜಾತಿಪದ್ಧತಿಯ ತಾರತಮ್ಯಗಳಿಂದ ಬಂಡಾಯ ಮತ್ತು ದಲಿತ ಕಾವ್ಯ ಪ್ರೇರಿತವಾಗಿದೆ.

— ಸ್ತ್ರೀ-ವಿಮೋಚನಾ ಚಳುವಳಿಗಳು ಸ್ತ್ರೀ-ಕಾವ್ಯ ಪ್ರಕಾರಕ್ಕೆ ಎಡೆ ಮಾದಿಕೊಟ್ಟಿವೆ.

— ಸಣ್ಣ ಕಥೆಗಳು ಹಾಗೂ ಭಾವಗಿತೆಗಳು ಸಹ ಇಪ್ಪತ್ತನೆ ಶತಮಾನದಲ್ಲಿ ಜನಪ್ರಿಯವಾದ ಸಾಹಿತ್ಯ ಪ್ರಕಾರಗಳು.


(Courtesy: sobagu)

No comments:

Post a Comment