"ಮನುಷ್ಯ ದೀಪವಾದರೂ ಆಗಬೇಕು, ಕನ್ನಡಿಯಾದರೂ ಆಗಬೇಕು. ಒಂದು ಬೆಳಕನ್ನು ಕೊಡುತ್ತದೆ ಮತ್ತೊಂದು ಅದನ್ನು ಪ್ರತಿಬಿಂಬಿಸುತ್ತದೆ. ಪ್ರತಿಯೊಬ್ಬರೂ ದೀಪ ಆಗದೇ ಹೋಗಬಹುದು ಆದರೆ ಕನ್ನಡಿ ಆಗಬಲ್ಲರು. ತಿಳಿದಿರುವ ಜ್ಞಾನವನ್ನು ಮತ್ತೊಬ್ಬರಿಗೆ ಹಂಚುವುದೇ ಜೀವನ.."—ಅರಿಸ್ಟಾಟಲ್

Sunday 8 March 2015

☀ಕನ್ನಡ ಸಾಹಿತ್ಯ ಮತ್ತು ಕನ್ನಡ ಸಾಹಿತ್ಯ ಚರಿತ್ರೆಯ ಪ್ರಮುಖ ಮೂರು ಘಟ್ಟಗಳು:  (Kannada literature and the three phases of history of Kannada literature)

☀ಕನ್ನಡ ಸಾಹಿತ್ಯ ಮತ್ತು ಕನ್ನಡ ಸಾಹಿತ್ಯ ಚರಿತ್ರೆಯ ಪ್ರಮುಖ ಮೂರು ಘಟ್ಟಗಳು:
(Kannada literature and the three phases of history of Kannada literature)

━━━━━━━━━━━━━━━━━━━━━━━━━━━━━━━━━━━━━━━━━━━━━


●.ಭಾರತದ ಕರ್ನಾಟಕ ರಾಜ್ಯದಲ್ಲಿ ಉಪಯೋಗಿಸಲ್ಪಡುವ ಕನ್ನಡ ಭಾಷೆಯ ಸಾಹಿತ್ಯ. ಕನ್ನಡ ಭಾಷೆ ದ್ರಾವಿಡ ಭಾಷಾ ಬಳಗಕ್ಕೆ ಸೇರುತ್ತದೆ. ಆಧುನಿಕ ಭಾರತದಲ್ಲಿ ಪ್ರಚಲಿತವಾಗಿರುವ ಭಾಷೆಗಳಲ್ಲಿ ಎರಡನೇ ಅತಿ ಹಳೆಯ ಭಾಷೆಯೂ ಹೌದು (ತಮಿಳಿನ ನಂತರ).

●.ಕನ್ನಡ ಸಾಹಿತ್ಯ ಭಾರತದಲ್ಲಿ ಮೂರನೇ ಅತಿ ಹಳೆಯ ಸಾಹಿತ್ಯಕ ಸಂಪ್ರದಾಯ, ಸಂಸ್ಕೃತ ಸಾಹಿತ್ಯ (ಮತ್ತು ಅದರ ಉಪಭಾಷೆಗಳಾದ ಪ್ರಾಕೃತ ಇತ್ಯಾದಿ) ಹಾಗೂ ತಮಿಳು ಸಾಹಿತ್ಯದ ನಂತರ.

●.ಕನ್ನಡ ಬರವಣಿಗೆಯ ಪ್ರಪ್ರಥಮ ಉದಾಹರಣೆ ದೊರಕಿರುವುದು ಹಲ್ಮಿಡಿ ಶಾಸನ ದಲ್ಲಿ (ಸು. ಕ್ರಿ.ಶ. ೪೫೦). ಪ್ರಸಿದ್ಧವಾದ ಬಾದಾಮಿ ಶಾಸನಗಳು ಪುರಾತನ ಕನ್ನಡ ಬರವಣಿಗೆಯ ಮತ್ತಷ್ಟು ಉದಾಹರಣೆಗಳನ್ನು ನೀಡುತ್ತವೆ.

●.ಉಪಲಬ್ಧವಾಗಿರುವ ಪ್ರಥಮ ಕನ್ನಡ ಪುಸ್ತಕವೆಂದರೆ ೯ ನೇ ಶತಮಾನದ ಅಮೋಘವರ್ಷ ನೃಪತುಂಗನ ಕವಿರಾಜಮಾರ್ಗ. ಈ ಪುಸ್ತಕ ಕನ್ನಡ ಕಾವ್ಯ, ಕನ್ನಡ ನಾಡು, ಮತ್ತು ಕನ್ನಡಿಗರ ಬಗ್ಗೆ ಬರೆಯಲ್ಪಟ್ಟ ಒಟ್ಟಾರೆ ಸಾರಾಂಶವೆನ್ನಬಹುದು. ಇದಕ್ಕೆ ಹಿಂದೆ ಬರೆಯಲ್ಪಟ್ಟ ಕೆಲವು ಕನ್ನಡ ಪುಸ್ತಕಗಳ ಉಲ್ಲೇಖ ಈ ಪುಸ್ತಕದಲ್ಲಿ ಬಂದಿರುವ ಆಧಾರದ ಮೇಲೆ ಕನ್ನಡ ಸಾಹಿತ್ಯದ ಉಗಮ ಸುಮಾರು ಕ್ರಿ.ಶ. ೬-೭ನೇ ಶತಮಾನಗಳಲ್ಲಿ ಆದದ್ದಿರಬಹುದು. ಆದರೆ ಕವಿರಾಜಮಾರ್ಗದ ಹಿಂದಿನ ಯಾವ ಕೃತಿಗಳೂ ಇದುವರೆಗೆ ದೊರಕಿಲ್ಲ.


●.ಕನ್ನಡ ಸಾಹಿತ್ಯದ ಚರಿತ್ರೆಯನ್ನು ಮೂರು ಘಟ್ಟಗಳಾಗಿ ವಿಂಗಡಿಸಬಹುದು:

✧.ಹಳೆಗನ್ನಡ,

✧.ನಡುಗನ್ನಡ

✧.ಆಧುನಿಕ ಕನ್ನಡ.


(To be Continued...)
(sobagu)

No comments:

Post a Comment