"ಮನುಷ್ಯ ದೀಪವಾದರೂ ಆಗಬೇಕು, ಕನ್ನಡಿಯಾದರೂ ಆಗಬೇಕು. ಒಂದು ಬೆಳಕನ್ನು ಕೊಡುತ್ತದೆ ಮತ್ತೊಂದು ಅದನ್ನು ಪ್ರತಿಬಿಂಬಿಸುತ್ತದೆ. ಪ್ರತಿಯೊಬ್ಬರೂ ದೀಪ ಆಗದೇ ಹೋಗಬಹುದು ಆದರೆ ಕನ್ನಡಿ ಆಗಬಲ್ಲರು. ತಿಳಿದಿರುವ ಜ್ಞಾನವನ್ನು ಮತ್ತೊಬ್ಬರಿಗೆ ಹಂಚುವುದೇ ಜೀವನ.."—ಅರಿಸ್ಟಾಟಲ್

Sunday 8 March 2015

☀ ವಚನ ಸಾಹಿತ್ಯ: (Vachana Literature)

☀ ವಚನ ಸಾಹಿತ್ಯ:
(Vachana Literature)

━━━━━━━━━━━━━━━━━━━━━━━━━━━━━━━━━━━━━━━━━━━━━

♦.ವಚನ ಸಾಹಿತ್ಯ.


●.ವಚನಗಳು ಎಂದು ಸಾಮಾನ್ಯವಾಗಿ ಕರೆಯಲಾಗುವ ವೀರಶೈವ ಶರಣರ ವಚನಗಳು ಮುಕ್ತ ಛಂದಸ್ಸಿನಲ್ಲಿವೆ.

— ಬಸವೇಶ್ವರ, ಅಕ್ಕಮಹಾದೇವಿ ಮೊದಲಾದವರ ವಚನಗಳನ್ನು ಶಾಸ್ತ್ರೀಯ ಸಂಗೀತದಲ್ಲಿ ಅಳವಡಿಸಿ ಮಲ್ಲಿಕಾರ್ಜುನ ಮನಸೂರ ಮೊದಲಾದ ಹಿಂದುಸ್ತಾನಿ ಸಂಗೀತ ಕಾರರು ಹಾಡಿದ್ದಾರೆ.

 — ಶರಣರ ನಂತರದ ಕವಿಯಾದ ಸರ್ವಜ್ಞರ ವಚನಗಳು ಮಾತ್ರ ತ್ರಿಪದಿಯಲ್ಲಿವೆ.


●.ವಚನಗಳು ಅಂದಿನ ಕಾಲದ ಸಾಮಾಜಿಕ, ಧಾರ್ಮಿಕ ಮತ್ತು ಆರ್ಥಿಕ ಪರಿಸ್ಥಿತಿಗಳ ಬಗೆಗಿನ ಯೋಚನಾಧಾರೆಗಳು.

— ಇನ್ನೂ ಮುಖ್ಯವಾಗಿ, ವಚನ ಸಾಹಿತ್ಯ ಅಂದಿನ ಸಾಮಾಜಿಕ ಕ್ರಾಂತಿಯ ಪ್ರಕ್ರಿಯೆಗೆ ಕನ್ನಡಿ ಹಿಡಿಯುತ್ತದೆ.

— ಬಸವಣ್ಣನವರಿಂದ ಆರಂಭವಾದ ಈ ಕ್ರಾಂತಿ ಜಾತಿ, ಮತ, ಧರ್ಮಗಳ ಯೋಚನೆಗಳ ಕ್ರಾಂತಿಕಾರಿ ಮರು-ಪರಿಶೀಲನೆಗೆ ದಾರಿ ಮಾಡಿಕೊಟ್ಟಿತು.


●.ವಚನ ಸಾಹಿತ್ಯದಿಂದ ಬಂದ ಮುಖ್ಯ ಬೋಧನೆಗಳೆಂದರೆ ಕಾಯಕವೇ ಕೈಲಾಸ ಮತ್ತು ಅಧ್ಯಾತ್ಮಿಕತೆಯ ಬಗ್ಗೆ ಹೊಸ ನೋಟ.

— ವಚನ ಸಾಹಿತ್ಯದ ಪ್ರಮುಖ ಹರಿಕಾರರೆಂದರೆ ಬಸವೇಶ್ವರ (೧೧೩೪-೧೧೯೬), ಅಲ್ಲಮಪ್ರಭು ಮತ್ತು ಕನ್ನಡದ ಮೊದಲ ಮಹಿಳಾ ಲೇಖಕಿಯಾದ ಅಕ್ಕ ಮಹಾದೇವಿ (೧೨ನೇ ಶತಮಾನ).


(To be Continued...)

(Courtesy: sobagu)

No comments:

Post a Comment