"ಮನುಷ್ಯ ದೀಪವಾದರೂ ಆಗಬೇಕು, ಕನ್ನಡಿಯಾದರೂ ಆಗಬೇಕು. ಒಂದು ಬೆಳಕನ್ನು ಕೊಡುತ್ತದೆ ಮತ್ತೊಂದು ಅದನ್ನು ಪ್ರತಿಬಿಂಬಿಸುತ್ತದೆ. ಪ್ರತಿಯೊಬ್ಬರೂ ದೀಪ ಆಗದೇ ಹೋಗಬಹುದು ಆದರೆ ಕನ್ನಡಿ ಆಗಬಲ್ಲರು. ತಿಳಿದಿರುವ ಜ್ಞಾನವನ್ನು ಮತ್ತೊಬ್ಬರಿಗೆ ಹಂಚುವುದೇ ಜೀವನ.."—ಅರಿಸ್ಟಾಟಲ್

Saturday 25 April 2015

☀ಕರ್ನಾಟಕದ ಪ್ರಮುಖ ನೀರಾವರಿ ಯೋಜನಗೆಳು : (The Major Irrigation Projects in Karnataka)

☀ಕರ್ನಾಟಕದ ಪ್ರಮುಖ ನೀರಾವರಿ ಯೋಜನಗೆಳು :
(The Major Irrigation Projects in Karnataka)

━━━━━━━━━━━━━━━━━━━━━━━━━━━━━━━━━━━━━━━━━━━━━
★Karnataka Economics
★ ಕರ್ನಾಟಕದ ಆರ್ಥಿಕತೆ.


—ಭಾರತದಲ್ಲಿ ನೀರಾವರಿ ಯೋಜನೆಗಳು ಇರುವಂತೆ ಕರ್ನಾಟಕದಲ್ಲಿಯು ಕೆಲವು ನೀರಾವರಿ ಯೋಜನೆಗಳನ್ನು ಕಾಣಬಹುದು. ಈ ಕೆಳಕಂಡಂತೆ ಅವುಗಳನ್ನು ಕಾಣಬಹುದು.

●.ಕೃಷ್ಣರಾಜ ಸಾಗರ :••———•• ಈ ಜಲಾಶಯವನ್ನು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕನ್ನಂಬಾಡಿ ಬಳಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದೆ. ಈ ಜಲಾಶಯ ಮಂಡ್ಯ ಮತ್ತು ಮೈಸೂರು ಜಿಲ್ಲೆಯ ಸುಮಾರು ೧.೯೫ ಲಕ್ಷ ಹೆಕ್ಟೆರ್ ಭೂಮಿಗೆ ನೀರು ಒದಗಿಸಿದೆ.


●.ಕೃಷ್ಣಾ ಮೇಲ್ದಂಡೆ ಯೋಜನೆ :••———•• ಈ ಜಲಾಶಯವನ್ನು ಕೃಷ್ಣಾ ನದಿಗೆ ಅಡ್ಡಲಾಗಿ ಆಲಮಟ್ಟಿ ಮತ್ತು ನಾರಾಯಣಪುರಗಳಲ್ಲಿ ನಿರ್ಮಿಸಿದೆ. ಬರಗಾಲ ಪೀಡಿತ ಬಿಜಾಪುರ ಮತ್ತು ಗುಲ್ಬರ್ಗಾ ರಾಯಚೂರು ಜಿಲ್ಲೆಗಳ ೬.೧೭ ಲಕ್ಷ ಹೆಕ್ಟರ್ ಭೂಮಿಗೆ ನೀರನ್ನು ಒದಗಿಸುವ ಗುರಿ ಹೊಂದಿದೆ.


●.ಮಲಪ್ರಭಾ ಯೋಜನೆ :••———•• ಮಲಪ್ರಭಾ ಯೋಜನೆಯಿಂದ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಬಳಿ ಜಲಾಶಯವನ್ನು ನಿರ್ಮಿಸಲಾಗಿದೆ. ಈ ಯೋಜನೆಯಿಂದ ೨,೨೦,೦೨೮ ಹೆಕ್ಟರ್ ಭೂಮಿಗೆ ನೀರನ್ನು ಒದಗಿಸುವ ಗುರಿ ಇದೆ.


●.ಭದ್ರಾ ಜಲಾಶಯ :••———•• ಈ ಜಲಾಶಯಗಳನ್ನು ಚಿಕ್ಕಮಂಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ ಬಳಿ ನಿರ್ಮಿಸಲಾಗಿದ್ದು, ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಂಗಳೂರು ಮತ್ತು ಬಳ್ಳಾರಿ ಜಿಲ್ಲೆಗಳ ೧,೦೫,೫೭೦ ಹೆಕ್ಟರ್ ಭೂಮಿಗೆ ನೀರಾವರಿ ಒದಗಿಸಲಾಗುತ್ತಿದೆ.


●.ತುಂಗಾಭದ್ರ ಜಲಾಶಯ :••———•• ಈ ಜಲಾಶಯವನ್ನು ಬಳ್ಳಾರಿ ಜಿಲ್ಲೆಯ ಹೊಸಪೇಟಿ ತಾಲ್ಲೂಕಿನ ಮಲ್ಲಾಪುರದ ಬಳಿ ಕರ್ನಾಟಕ ಮತ್ತು ಆಂಧ್ರ ಪ್ರದೇಶದ ರಾಜ್ಯಗಳ ಜಂಟಿ ಯೋಜನೆಯಾಗಿ ತುಂಗಾಭದ್ರ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದೆ. ಈ ಯೋಜನೆಯು ೧೯೪೫ ರಲ್ಲಿ ಪ್ರಾರಂಭವಾಯಿತು. ಈ ಜಲಾಶಯದಿಂದ ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಗಳ ಸುಮಾರು ೩,೬೨,೭೧೫ ಹೆಕ್ಟರ್ ಭೂಮಿಗೆ ನೀರನ್ನು ಒದಗಿಸಲಾಗುತ್ತಿದೆ.


●.ತುಂಗಾಭದ್ರ ಮೇಲ್ದಂಡೆ ಯೋಜನೆ :••———•• ಈ ಯೋಜನೆಯಡಿ ಈಗ ಶಿವಮೊಗ್ಗ ಬಳಿಯ ತುಂಗಾ ಅಣೆಕಟ್ಟಿಗೆ ಹೊಸರೂಪ ನೀಡಿ ಶಿವಮೊಗ್ಗ ಚಿತ್ರದುರ್ಗ, ದಾರವಾಡ ಜಿಲ್ಲೆಗಳ ಸುಮಾರು ೯೪,೬೬೮ ಹೆಕ್ಟರ್ ಭೂಮಿಗೆ ನೀರನ್ನು ಒದಗಿಸುವ ಗುರಿ ಹೊಂದಲಾಗಿದೆ.


●.ಹಾರಂಗಿ ಯೋಜನೆ :••———•• ಈ ಯೋಜನೆಯಂತೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಹುಡ್ಗೂರು ಗ್ರಾಮದ ಬಳಿ ಹಾರಂಗಿ ನದಿಗೆ ಅಡ್ಡಲಾಗಿ ಜಲಾಶಯ ನಿರ್ಮಿಸಿ ಕೊಡಗು, ಹಾಸನ ಮತ್ತು ಮೈಸೂರು ಜಿಲ್ಲೆಗಳ ಸುಮಾರು ೪೩,೦೩೬ ಹೆಕ್ಟರ್ ಭೂಮಿಗೆ ನೀರನ್ನು ಒದಗಿಸಿದೆ.

(ಕೃಪೆ: ಸಮಾಜಕ್ಕಾಗಿ) 

No comments:

Post a Comment