"ಮನುಷ್ಯ ದೀಪವಾದರೂ ಆಗಬೇಕು, ಕನ್ನಡಿಯಾದರೂ ಆಗಬೇಕು. ಒಂದು ಬೆಳಕನ್ನು ಕೊಡುತ್ತದೆ ಮತ್ತೊಂದು ಅದನ್ನು ಪ್ರತಿಬಿಂಬಿಸುತ್ತದೆ. ಪ್ರತಿಯೊಬ್ಬರೂ ದೀಪ ಆಗದೇ ಹೋಗಬಹುದು ಆದರೆ ಕನ್ನಡಿ ಆಗಬಲ್ಲರು. ತಿಳಿದಿರುವ ಜ್ಞಾನವನ್ನು ಮತ್ತೊಬ್ಬರಿಗೆ ಹಂಚುವುದೇ ಜೀವನ.."—ಅರಿಸ್ಟಾಟಲ್

Saturday 5 September 2015

☀ಪ್ರಚಲಿತ ಉಪಯುಕ್ತ ಸಮೀಕ್ಷೆಗಳು ಮತ್ತು ವಿಶೇಷ ವರದಿಗಳು (ಅಂಕಿ-ಅಂಶಗಳು) : ✧.4) 2015 ನೇ ಸಾಲಿನ ಕೇಂದ್ರ ಬಜೆಟ್ ಆರ್ಥಿಕ ಸಮೀಕ್ಷಾ ವರದಿ: (Special Reports-figures on 2015 Union Budget Economic Survey )

☀ಪ್ರಚಲಿತ ಉಪಯುಕ್ತ ಸಮೀಕ್ಷೆಗಳು ಮತ್ತು ವಿಶೇಷ ವರದಿಗಳು (ಅಂಕಿ-ಅಂಶಗಳು) :
✧.4) 2015 ನೇ ಸಾಲಿನ ಕೇಂದ್ರ ಬಜೆಟ್ ಆರ್ಥಿಕ ಸಮೀಕ್ಷಾ ವರದಿ:
(Special Reports-figures on 2015 Union Budget Economic Survey )
━━━━━━━━━━━━━━━━━━━━━━━━━━━━━━━━━━━━━━━━━━━━━

★ ಪ್ರಚಲಿತ ಉಪಯುಕ್ತ ಸಮೀಕ್ಷೆಗಳು ಮತ್ತು ವಿಶೇಷ ವರದಿಗಳು (ಅಂಕಿ-ಅಂಶಗಳು)
(Current useful surveys and special reports-figures)

★ ಪ್ರಚಲಿತ ಘಟನೆಗಳು.
(Current Affairs)


●. 2015ನೇ ಸಾಲಿನ ಆರ್ಥಿಕ ಸಮೀಕ್ಷಾ ವರದಿ ಪ್ರಕಾರ ಮುಂದಿನ ವರ್ಷದಲ್ಲಿ ಭಾರತದ ಆರ್ಥಿಕತೆ ಶೇ.8ರಷ್ಟು ಪ್ರಗತಿ ಕಾಣುವ ಸಾಧ್ಯತೆ ಇದೆ ಎಂದು ಶುಕ್ರವಾರ ಸಮೀಕ್ಷಾ ವರದಿ ಮಂಡಿಸಿದ ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಹೇಳಿದ್ದಾರೆ.

●. ಪ್ರಸಕ್ತ ಸಾಲಿನ ಆರ್ಥಿಕ ಸಮೀಕ್ಷಾ ವರದಿ ಪ್ರಕಟಗೊಂಡಿದ್ದು, ದೇಶದ ಒಟ್ಟಾರೆ ರಾಷ್ಟ್ರೀಯ ಉತ್ಪನ್ನ (ಜಿಡಿಪಿ) 2016–17ನೇ ಸಾಲಿನಲ್ಲಿ ಶೇ 8.1 ರಿಂದ ಶೇ 8.5ರ ವರೆಗೆ ಪ್ರಗತಿ ಕಾಣಲಿದೆ.

●. 2018-20ರ ವೇಳೆಗೆ ದೇಶವು ಎರಡಂಕಿ ಪ್ರಗತಿ ಪಥದಲ್ಲಿ ಮುನ್ನಡೆಯಲಿದೆ ಎಂದು ಅಂದಾಜಿಸಲಾಗಿದ್ದು, 2013–14ನೇ ಸಾಲಿನಲ್ಲಿ ಇದು ಶೇ 6.9ರಷ್ಟಿದ್ದ ಜಿಡಿಪಿ ಪ್ರಸಕ್ತ ಹಣಕಾಸು ವರ್ಷದ ಅಂತ್ಯಕ್ಕೆ 7.4ರಷ್ಟು ಏರಿಕೆ ಕಾಣುವ ನಿರೀಕ್ಷೆ ಇದೆ.

●. ಕಚ್ಚಾ ತೈಲದ ಬೆಲೆ ಮತ್ತು ಹಣದುಬ್ಬರವೂ ಗಣನೀಯವಾಗಿ ಇಳಿಕೆಯಾಗಿರುವ ಹಿನ್ನಲೆಯಲ್ಲಿ ಬ್ಯಾಂಕ್‌ಗಳು ಬಡ್ಡಿ ದರ ತಗ್ಗಿಸುವ ಸಾಧ್ಯತೆ ಹೆಚ್ಚಿದ್ದು ಮಾರುಕಟ್ಟೆಗೆ ಹೆಚ್ಚಿನ ಬಂಡವಾಳ ಹರಿವು ನಿರೀಕ್ಷಿಸಲಾಗಿದೆ.

●. ಅಲ್ಲದೇ ಜಿಡಿಪಿ ಪ್ರಗತಿಗಾಗಿ ಮತ್ತು ರಫ್ತು ಉತ್ತೇಜನಕ್ಕೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಜಾರಿಗೊಳಿಸಲು ಸಲಹೆ ನೀಡಲಾಗಿದ್ದು, ಹಣಕಾಸು ಮಾರುಕಟ್ಟೆ ಸ್ಥಿರತೆಗೆ ಇನ್ನಷ್ಟು ಬಿಗಿ ಕ್ರಮ ಕೈಗೊಳ್ಳಲಾಗವುದು ಎಂದು ಕೇಂದ್ರ ಹಣಕಾಸು ಸಚಿವ ಹೇಳಿದ್ದಾರೆ.


☀ಆರ್ಥಿಕ ಸಮೀಕ್ಷಾ ವರದಿಯ ಪ್ರಮುಖಾಂಶಗಳು :
•┈┈┈┈┈┈┈┈┈┈┈┈┈┈┈┈┈┈┈┈┈┈┈┈┈•

●. ಮುಂಬರುವ ವರ್ಷದಲ್ಲಿ ಶೇ.8ರಷ್ಟು ಆರ್ಥಿಕ ವೃದ್ಧಿ ನಿರೀಕ್ಷೆ

●. ಆರ್ಥಿಕ ಬಲವರ್ಧನೆ ಸರ್ಕಾರ ಬದ್ಧ

●. ಬಿಗ್ ಬ್ಯಾಂಗ್ ಸುಧಾರಣೆಗೆ ಅವಕಾಶ

●. ದೇಶವು ಎರಡಂಕಿ ಪ್ರಗತಿ ಪಥದಲ್ಲಿ ಮುನ್ನಡೆಯಲಿದೆ.

●. ಕಚ್ಚಾ ತೈಲದ ಬೆಲೆ ತಗ್ಗಿದೆ.

●. ಹಣದುಬ್ಬರವೂ ಗಣನೀಯವಾಗಿ ಇಳಿಕೆಯಾಗಿದೆ.

●. 2015–16ನೇ ಸಾಲಿನಲ್ಲಿ ಸಹಜ ಮುಂಗಾರು ಲಭಿಸಿದರೆ ಉತ್ತಮ ಆರ್ಥಿಕ ವೃದ್ಧಿ ದರ ನಿರೀಕ್ಷೆ

●. ಬ್ಯಾಂಕ್‌ ಬಡ್ಡಿ ದರ ಕಡಿತ ಸಾಧ್ಯತೆ ಹೆಚ್ಚಳ

●. ಏಪ್ರಿಲ್‌–ಜನವರಿ ಅವಧಿಯಲ್ಲಿ ಆಹಾರ ಸಬ್ಸಿಡಿ ಮೊತ್ತದಲ್ಲಿ ಶೇ 20 ರಷ್ಟು ಹೆಚ್ಚಳ. 1.08 ಲಕ್ಷ ಕೋಟಿಗೆ ಏರಿಕೆ

●. 2015–16ನೇ ಸಾಲಿನಲ್ಲಿ ಗ್ರಾಹಕ ಬೆಲೆ ಸೂಚ್ಯಂಕ ಆಧರಿಸಿದ ಹಣದುಬ್ಬರ ಶೇ 5 ರಿಂದ ಶೇ 5.5ರ ಒಳಗೆ ಸ್ಥಿರಗೊಳ್ಳುವ ಅಂದಾಜು

●. 2013–14ರಲ್ಲಿ ರೂ 1.39 ಲಕ್ಷ ಕೋಟಿಯಷ್ಟಿದ್ದ ಪೆಟ್ರೋಲಿಯಂ ಉತ್ಪನ್ನಗಳ ಮಾರಾಟ ನಷ್ಟ 2014–15ರಲ್ಲಿ ರೂ 74,664 ಕೋಟಿಗೆ ಇಳಿಕೆ

●. ರೈಲ್ವೆ ಕಾರ್ಯವಿಧಾನದಲ್ಲಿ ಬದಲಾವಣೆ.

●. ಸರಕು ಸಾಗಣೆ ಸೇರಿದಂತೆ ವಾಣಿಜ್ಯ ವ್ಯವಹಾರಗಳಲ್ಲಿ ತಂತ್ರಜ್ಞಾನ ಅಳವಡಿಕೆ.

●. ಜನ್‌ ಧನ್‌ ಯೋಜನಾ, ಆಧಾರ್‌ ಮೂಲಕ ಬಡವರಿಗೆ ಸೋರಿಕೆ ಇಲ್ಲದೆ ಹಣ ವರ್ಗಾವಣೆ

●. ಹೂಡಿಕೆಗಾಗಿ ಮಾತ್ರ ಸಾಲ ಪಡೆಯಲು ಸಲಹೆ

●. ಏಪ್ರಿಲ್‌–ಜನವರಿ ಅವಧಿಯಲ್ಲಿ ಆಹಾರ ಸಬ್ಸಿಡಿ ಮೊತ್ತದಲ್ಲಿ ಶೇ 20 ರಷ್ಟು ಹೆಚ್ಚಳ. 1.08 ಲಕ್ಷ ಕೋಟಿಗೆ ಏರಿಕೆ

No comments:

Post a Comment