"ಮನುಷ್ಯ ದೀಪವಾದರೂ ಆಗಬೇಕು, ಕನ್ನಡಿಯಾದರೂ ಆಗಬೇಕು. ಒಂದು ಬೆಳಕನ್ನು ಕೊಡುತ್ತದೆ ಮತ್ತೊಂದು ಅದನ್ನು ಪ್ರತಿಬಿಂಬಿಸುತ್ತದೆ. ಪ್ರತಿಯೊಬ್ಬರೂ ದೀಪ ಆಗದೇ ಹೋಗಬಹುದು ಆದರೆ ಕನ್ನಡಿ ಆಗಬಲ್ಲರು. ತಿಳಿದಿರುವ ಜ್ಞಾನವನ್ನು ಮತ್ತೊಬ್ಬರಿಗೆ ಹಂಚುವುದೇ ಜೀವನ.."—ಅರಿಸ್ಟಾಟಲ್

Friday 9 September 2016

☀ ಪೊಲೀಸ್ ನೇಮಕ ವಯೋಮಿತಿ ಏರಿಕೆ - 2016 ಸಿಹಿ ಸುದ್ದಿ! (Age Relaxation in Karnataka State Police Recruitment)

☀ ಪೊಲೀಸ್ ನೇಮಕ ವಯೋಮಿತಿ ಏರಿಕೆ - 2016 ಸಿಹಿ ಸುದ್ದಿ!
(Age Relaxation in Karnataka State Police Recruitment)
•─━━━━━═══════════━━━━━─••─━━━━━═══════════━━━━━─•

★ ರಾಜ್ಯ ಪೊಲೀಸ್ ಇಲಾಖೆಯಲ್ಲಿ ನೇಮಕಾತಿ
(Karnataka State Police Recruitment)

★ ಪೊಲೀಸ್ ಕಾನ್ಸ್‌ಟೇಬಲ್‌ಗಳ ಹಾಗೂ ಎಸ್‌ಐಗಳ ವಯೋಮಿತಿ ಹೆಚ್ಚಳ!



(ವಿಜಯ ಕರ್ನಾಟಕ  » ರಾಜ್ಯ » ಕರ್ನಾಟಕ » | Sep 9, 2016, 04.00 AM IST)

ಬೆಂಗಳೂರು: ಪೊಲೀಸ್ ಇಲಾಖೆ ಸೇರಬೇಕೆಂಬ ಕನಸು ಹೊತ್ತವರಿಗೆ ಸಿಹಿ ಸುದ್ದಿ ಇಲ್ಲಿದೆ. ರಾಜ್ಯ ಸರಕಾರ ಅಭ್ಯರ್ಥಿಗಳ ಗರಿಷ್ಠ ವಯೋಮಿತಿಯನ್ನು ಎರಡು ವರ್ಷ ವಿಸ್ತರಣೆ ಮಾಡಲು ನಿರ್ಧರಿಸಿದೆ.

ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸಾಮಾನ್ಯ ಹಾಗೂ ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳ ಗರಿಷ್ಠ ವಯೋಮಿತಿಯನ್ನು 26 ವರ್ಷಗಳಿಂದ 28 ವರ್ಷಗಳಿಗೆ ಏರಿಕೆ ಮಾಡಲಾಗಿದ್ದು, ಪರಿಶಿಷ್ಟ ಅಭ್ಯರ್ಥಿಗಳಿಗೆ 30 ವರ್ಷದ ವರೆಗೂ ವಯೋಮಿತಿ ಹೆಚ್ಚಳ ಮಾಡಲಾಗಿದೆ.

ನೆರೆಯ ತಮಿಳುನಾಡು ಹಾಗೂ ಮಹಾರಾಷ್ಟ್ರದ ಮಾದರಿಯಲ್ಲಿ ವಯೋಮಿತಿ ಹೆಚ್ಚಳ ಮಾಡಬೇಕು ಎಂಬ ಬೇಡಿಕೆಯಂತೆ ಸಂಪುಟ ಈ ತೀರ್ಮಾನ ಕೈಗೊಂಡಿದ್ದು, ಅದಕ್ಕಾಗಿ 'ಕರ್ನಾಟಕ ರಾಜ್ಯ ಪೊಲೀಸ್ ಸೇವೆಗಳು (ನೇಮಕಾತಿ) ತಿದ್ದುಪಡಿ ನಿಯಮಗಳು 2016' ಕ್ಕೆ ಸಂಪುಟ ಅನುಮೋದನೆ ನೀಡಿತು ಎಂದು ಸಭೆ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.

★ 21 ಸಾವಿರ ಸಿಬ್ಬಂದಿ ನೇಮಕ

ಹಲವು ವರ್ಷಗಳ ಬಳಿಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ಪರ್ವ ನಡೆದಿದೆ. ಒಟ್ಟು 21,047 ಸಬ್ ಇನ್ಸ್‌ಪೆಕ್ಟರ್ ಹಾಗೂ ಪೊಲೀಸ್ ಕಾನ್ಸ್‌ಟೇಬಲ್‌ಗಳ ಹುದ್ದೆಗಳ ಭರ್ತಿ ಪ್ರಕ್ರಿಯೆ ಚಾಲನೆ ಪಡೆದುಕೊಂಡಿದೆ. ಈಗಾಗಲೇ 6 ಸಾವಿರ ಕಾನ್ಸ್‌ಟೇಬಲ್‌ಗಳ ನೇಮಕಾತಿ ನಡೆದಿದ್ದು, ತರಬೇತಿ ಮುಗಿಸಿ ಕೆಲಸಕ್ಕೆ ಸೇರ್ಪಡೆಯಾಗುವ ಹಂತದಲ್ಲಿದ್ದಾರೆ. ಹೊಸದಾಗಿ 7,548 ಕಾನ್ಸ್‌ಟೇಬಲ್‌ಗಳ ನೇಮಕಕ್ಕೆ ಅಧಿಸೂಚನೆ ಹೊರಬೀಳುತ್ತಿದೆ. 2ನೇ ಹಂತದಲ್ಲಿ 6,610 ಕಾನ್ಸ್‌ಟೇಬಲ್‌ಗಳ ನೇಮಕಾತಿಗೆ ಹಣಕಾಸು ಇಲಾಖೆ ಅನುಮೋದನೆ ಸಿಕ್ಕಿದ್ದು, ಈ ಸಂಬಂಧವೂ ಸದ್ಯದಲ್ಲೇ ಅಧಿಸೂಚನೆ ಹೊರಡಲಿದೆ. ಈ ಆರ್ಥಿಕ ವರ್ಷಾಂತ್ಯದೊಳಗೆ ಎಲ್ಲ 20,158 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿ ಪೂರ್ಣಗೊಳ್ಳಲಿದೆ ಎಂದು ಗೃಹ ಸಚಿವರು ಪ್ರಕಟಿಸಿದ್ದಾರೆ.


★ ಮೊದಲು ಲಿಖಿತ ಪರೀಕ್ಷೆ

ನೇಮಕಾತಿಯಲ್ಲಿ ಮೊದಲು ದೈಹಿಕ ಪರೀಕ್ಷೆ ನಡೆಸಿ, ಅರ್ಹರಿಗೆ ಲಿಖಿತ ಪರೀಕ್ಷೆ ನಡೆಸುವ ವ್ಯವಸ್ಥೆ ಇತ್ತು. ಎಲ್ಲರಿಗೂ ದೈಹಿಕ ಪರೀಕ್ಷೆ ನಡೆಸಬೇಕಿದ್ದ ಕಾರಣ ಪ್ರಕ್ರಿಯೆ ವಿಳಂಬವಾಗುತ್ತಿತ್ತು. ಅದನ್ನು ತಪ್ಪಿಸಲು ಈಗ ಮೊದಲು ಲಿಖಿತ ಪರೀಕ್ಷೆ ನಡೆಸಿ, ಅರ್ಹರಿಗೆ ದೈಹಿಕ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಹೀಗಾಗಿ, ನೇಮಕಾತಿ ಪ್ರಕ್ರಿಯೆ ಶೀಘ್ರ ನಡೆಯಲಿದೆ ಎಂದು ಪರಮೇಶ್ವರ್ ತಿಳಿಸಿದರು.

889 ಎಸ್‌ಐಗಳ ನೇಮಕ: ಈಗಾಗಲೇ ತರಬೇತಿಯಲ್ಲಿರುವ 260 ಎಸ್ಸೈಗಳು ಮುಂದಿನ ತಿಂಗಳು ಸೇವೆಗೆ ಸೇರ್ಪಡೆಯಾಗಲಿದ್ದು, 2016 -17ನೇ ಸಾಲಿಗೆ ಹೊಸದಾಗಿ 629 ಸಬ್ ಇನ್ಸ್‌ಪೆಕ್ಟರ್‌ಗಳ ನೇಮಕಾತಿಗೆ ಸದ್ಯದಲ್ಲೇ ಅಧಿಸೂಚನೆ ಹೊರಡಿಸಲಾಗುತ್ತಿದೆ ಎಂದು ಪರಮೇಶ್ವರ್ ಹೇಳಿದರು.

ಈ ಪೈಕಿ 398 ಸಿವಿಲ್, 51 ಸಿಎಆರ್, 28 ಕೆಎರ್ಸ್ಸಾಪಿ, 9 ಫಿಂಗರ್‌ಪ್ರಿಂಟ್ ಹಾಗೂ 19 ಮಂದಿಯನ್ನು ವೈರ್‌ಲೆಸ್ ವಿಭಾಗಕ್ಕೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಇದೇ ಮೊದಲ ಬಾರಿಗೆ ಗುಪ್ತದಳ ಹಾಗೂ ಸಿಐಡಿಗೆ ಪ್ರತ್ಯೇಕವಾಗಿ ಎಸ್‌ಐಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಈವರೆಗೆ ಸಿವಿಲ್ ಪೊಲೀಸರನ್ನೇ ಈ ವಿಭಾಗಗಳಿಗೆ ನಿಯೋಜನೆ ಮಾಡಲಾಗುತ್ತಿತ್ತು ಎಂದು ತಿಳಿಸಿದರು.

No comments:

Post a Comment