"ಮನುಷ್ಯ ದೀಪವಾದರೂ ಆಗಬೇಕು, ಕನ್ನಡಿಯಾದರೂ ಆಗಬೇಕು. ಒಂದು ಬೆಳಕನ್ನು ಕೊಡುತ್ತದೆ ಮತ್ತೊಂದು ಅದನ್ನು ಪ್ರತಿಬಿಂಬಿಸುತ್ತದೆ. ಪ್ರತಿಯೊಬ್ಬರೂ ದೀಪ ಆಗದೇ ಹೋಗಬಹುದು ಆದರೆ ಕನ್ನಡಿ ಆಗಬಲ್ಲರು. ತಿಳಿದಿರುವ ಜ್ಞಾನವನ್ನು ಮತ್ತೊಬ್ಬರಿಗೆ ಹಂಚುವುದೇ ಜೀವನ.."—ಅರಿಸ್ಟಾಟಲ್

Tuesday 5 December 2017

☀️ Part-4.>> ಕೆಎಎಸ್ ಮುಖ್ಯ ಪರೀಕ್ಷೆಯ ತಯಾರಿಗಾಗಿ (ಸಾಮಾನ್ಯ ಅಧ್ಯಯನ) ಮಾದರಿ ಪ್ರಶ್ನೆಗಳು: (KAS Mains Exam Module Questions for General Studies)

☀️ Part-4.>> ಕೆಎಎಸ್ ಮುಖ್ಯ ಪರೀಕ್ಷೆಯ ತಯಾರಿಗಾಗಿ (ಸಾಮಾನ್ಯ ಅಧ್ಯಯನ) ಮಾದರಿ ಪ್ರಶ್ನೆಗಳು:
(KAS Mains Exam Module Questions for General Studies)
━━━━━━━━━━━━━━━━━━━━━━━━━━━━━━━━━━━━━━━━━━━━━━━━━━━━━━━

★ ಕೆಎಎಸ್ ಮುಖ್ಯ ಪರೀಕ್ಷಾ ಮಾದರಿ  ಪ್ರಶ್ನೆಗಳು
(kas Mains Exam Module Questions)

 ★ ಸಾಮಾನ್ಯ ಅಧ್ಯಯನ ಪತ್ರಿಕೆ
(General Studies Papers


 ಗೆಳೆಯರೇ... ಮುಂಬರುವ ಕೆಎಎಸ್ ಮುಖ್ಯ ಪರೀಕ್ಷೆಯನ್ನು ಗಮನದಲ್ಲಿಟ್ಟುಕೊಂಡು ನನ್ನ ಜ್ಞಾನದ ಪರಿಮಿತಿಯಲ್ಲಿ ಮುಖ್ಯ ಪರೀಕ್ಷೆಗಾಗಿ (ಸಾಮಾನ್ಯ ಅಧ್ಯಯನ ಎಲ್ಲಾ ಪತ್ರಿಕೆಗಳನ್ನೊಳಗೊಂಡಂತೆ) ಕೆಲವು ಮಾದರಿ ಪ್ರಶ್ನೆಗಳನ್ನು ತಯಾರಿಸಿ ನಿಮ್ಮ °ಸ್ಪರ್ಧಾಲೋಕ°ದಲ್ಲಿ ಮುಂದಿಟ್ಟಿರುವೆನು. ಇವು ಸಾಧ್ಯವಾದಷ್ಟು ನಂಬಲರ್ಹವಾದ ಮೂಲಗಳಿಂದ ಕಲೆಹಾಕಿರುವಂಥವು. ಇವೇ ಕೊನೆಯಲ್ಲ. ಏನಾದರೂ ತಪ್ಪು-ತಡೆಗಳಿದ್ದಲ್ಲಿ ದಯವಿಟ್ಟು ನನ್ನ ಗಮನಕ್ಕೆ ತರಬೇಕೆಂದು ವಿನಂತಿ.
(G-Mail : yaseen7ash@gmail.com)


Continued..(ಮುಂದುವರೆದ ಭಾಗ)


•••ಈ ಕೆಳಗಿನ ಪ್ರಶ್ನೆಗಳಿಗೆ 200 or 250 ಶಬ್ದಗಳಲ್ಲಿ ಉತ್ತರಿಸಲು ಪ್ರಯತ್ನಿಸಬೇಕು.



28. 'ಸೆಂಡೈ ಕಟ್ಟುಪಾಡು' ಅಥವಾ 'ಸೆಂಡೈ ಚೌಕಟ್ಟು'  ಎಂದರೇನು? ಅದರ ಧ್ಯೇಯೋದ್ದೇಶಗಳು ಮತ್ತು ಗುರಿಗಳನ್ನು ನಿರೂಪಿಸಿ. ಜೊತೆಗೆ ಅವುಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ಸರ್ಕಾರವು ಕೈಗೊಂಡಿರುವ ಮಹತ್ವದ ಕ್ರಮಗಳನ್ನು ಚರ್ಚಿಸಿ.
(ಪತ್ರಿಕೆ 4 — ಸಾಮಾನ್ಯ ಅಧ್ಯಯನ 3)


29. ವಿಕೋಪ ನಿರ್ವಹಣೆ ಕ್ಷೇತ್ರದಲ್ಲಿ ಸಾಮರ್ಥ್ಯ ನಿರ್ಮಾಣ ಪ್ರಯತ್ನವನ್ನು ಹೆಚ್ಚಿಸುವಲ್ಲಿ ರಾಷ್ಟ್ರೀಯ ವಿಕೋಪ ನಿರ್ವಹಣಾ ಸಂಸ್ಥೆಯು ಅಳವಡಿಸಿಕೊಂಡಿರುವ ರಚನಾತ್ಮಕ ಕ್ರಮಗಳಾವುವು? ವಿವರಿಸಿ.
(ಪತ್ರಿಕೆ 4 — ಸಾಮಾನ್ಯ ಅಧ್ಯಯನ 3)


30. ಒಂದೇ ಅಕ್ಷಾಂಶದ ಮೇಲಿರುವ ದೇಶದ ಪೂರ್ವ - ಪಶ್ಚಿಮ ಭಾಗಗಳು ಪರಸ್ಪರ ವೈಪರೀತ್ಯದ ಮಳೆಯ ಹಂಚಿಕೆಯನ್ನು ಹೊಂದಿವೆ ಏಕೆ? ಕಾರಣಗಳೊಂದಿಗೆ ವಿವರಿಸಿ.
(ಪತ್ರಿಕೆ 3 — ಸಾಮಾನ್ಯ ಅಧ್ಯಯನ 2)


31. 'ನವಭಾರತ ಪರಿಕಲ್ಪನೆ'ಗೆ ನೀವೇನೆಂದು ಅರ್ಥೈಸುವಿರಿ?  '2022ರ ವೇಳೆಗೆ ನವಭಾರತ ನಿರ್ಮಾಣ' ಕಾರ್ಯವನ್ನು ಸಾಕಾರಗೊಳಿಸಲು ಕೇಂದ್ರ ಸರ್ಕಾರವು ಇತ್ತೀಚೆಗೆ ಕೈಗೊಂಡ ಹಾಗೂ ಕೈಗೊಳ್ಳಬಹುದಾದ ಕ್ರಮಗಳನ್ನು ಚರ್ಚಿಸಿ.
(ಪತ್ರಿಕೆ 2 — ಸಾಮಾನ್ಯ ಅಧ್ಯಯನ 1)


32. ಆಧುನಿಕ ಕೃಷಿ ಮತ್ತು ರೈತ ಸಮುದಾಯದ ಸಮೃದ್ಧಿ, ಏಳ್ಗೆಗಾಗಿ ಇತ್ತೀಚೆಗೆ ಸರ್ಕಾರ (ಕೇಂದ್ರ / ರಾಜ್ಯ) ವು ಕೈಗೊಂಡ ಕ್ರಮಗಳನ್ನು ಅವಲೋಕಿಸಿ.
(ಪತ್ರಿಕೆ 2 — ಸಾಮಾನ್ಯ ಅಧ್ಯಯನ 1)


33. ನೈಸರ್ಗಿಕ ವಿಕೋಪ ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳ ಮುಂದಿರುವ ಸವಾಲುಗಳು.
(ಪತ್ರಿಕೆ 4 — ಸಾಮಾನ್ಯ ಅಧ್ಯಯನ 3)


34. 'ಜೈವಿಕ ಭಯೋತ್ಪಾದನೆ' ಎಂದರೇನು? 'ಜೈವಿಕ ಭಯೋತ್ಪಾದನೆ'ಯಿಂದ ಉಂಟಾಗುವ ಜೈವಿಕ ಅಪಾಯಗಳನ್ನು ತಡೆಯುವಲ್ಲಿ  ಮತ್ತು ನಿಯಂತ್ರಿಸುವಲ್ಲಿ ಸರ್ಕಾರವು ಕೈಗೊಂಡ ಸುರಕ್ಷತಾ ಕ್ರಮಗಳನ್ನು ವಿವರಿಸಿ.
(ಪತ್ರಿಕೆ 4 — ಸಾಮಾನ್ಯ ಅಧ್ಯಯನ 3)

...ಮುಂದುವರೆಯುವುದು. 

No comments:

Post a Comment