"ಮನುಷ್ಯ ದೀಪವಾದರೂ ಆಗಬೇಕು, ಕನ್ನಡಿಯಾದರೂ ಆಗಬೇಕು. ಒಂದು ಬೆಳಕನ್ನು ಕೊಡುತ್ತದೆ ಮತ್ತೊಂದು ಅದನ್ನು ಪ್ರತಿಬಿಂಬಿಸುತ್ತದೆ. ಪ್ರತಿಯೊಬ್ಬರೂ ದೀಪ ಆಗದೇ ಹೋಗಬಹುದು ಆದರೆ ಕನ್ನಡಿ ಆಗಬಲ್ಲರು. ತಿಳಿದಿರುವ ಜ್ಞಾನವನ್ನು ಮತ್ತೊಬ್ಬರಿಗೆ ಹಂಚುವುದೇ ಜೀವನ.."—ಅರಿಸ್ಟಾಟಲ್

Sunday 11 February 2018

☀️ PART III— ಐಎಎಸ್ / ಕೆಎಎಸ್ ಪರೀಕ್ಷಾ ತಯಾರಿ ಬಿಟ್ಸ್ (IAS/KAS Exam Preparation Notes Bits)

☀️ PART III— ಐಎಎಸ್ / ಕೆಎಎಸ್ ಪರೀಕ್ಷಾ ತಯಾರಿ ಬಿಟ್ಸ್
(IAS/KAS Exam Preparation Notes Bits)
━━━━━━━━━━━━━━━━━━━━━━━━━━━━━━━━━━━━━━━━━━━━━━━━━━━━━━━
★ ಐಎಎಸ್ / ಕೆಎಎಸ್ ಪರೀಕ್ಷಾ ತಯಾರಿ
(IAS / KAS exam preparation notes)

★ ಸಾಮಾನ್ಯ ಅಧ್ಯಯನ
(general studies)


...ಮುಂದುವರೆದ ಭಾಗ.

ಗಮನಕ್ಕೆ — ಇಲ್ಲಿ ಹಂಚಿಕೊಂಡಿರುವ ಮಾಹಿತಿಯು ಹಲವಾರು ನಿಖರ, ನಂಬಲರ್ಹವಾದ, ನೈಜ್ಯ ಮಾಹಿತಿಗಳನ್ನೊಳಗೊಂಡ ಹಲವು ಮೂಲಗಳಿಂದ ಕಲೆಹಾಕಿರುವಂತಹವು. ಏನಾದರೂ ಬರಹದಲ್ಲಿ ತಪ್ಪುಗಳಿದ್ದಲ್ಲಿ ಕ್ಷಮಿಸಿ ಹಾಗೂ ನನ್ನ ಗಮನಕ್ಕೆ ತನ್ನಿ. 
Gmail : yaseen7ash@gmail.com


30. ನಮ್ಮಲ್ಲಿರುವ 250 ರಾಜ್ಯಸಭಾ ಸ್ಥಾನಗಳ ಪೈಕಿ 12 ಜನರನ್ನು ಸಚಿವರ ಸಮಿತಿಯ ಸಲಹೆಯ ಮೇರೆಗೆ ರಾಷ್ಟ್ರಪತಿ ನೇರವಾಗಿ ಆಯ್ಕೆ ಮಾಡುತ್ತಾರೆ. ವಿವಿಧ ರಂಗಗಳಲ್ಲಿನ ಸಾಧಕರನ್ನು ಇದಕ್ಕೆ ಪರಿಗಣಿಸಲಾಗುತ್ತದೆ.
— ಇನ್ನು ಉಳಿದ 238 ಸ್ಥಾನಗಳಿಗೆ ರಾಜ್ಯಗಳ ವಿಧಾನಸಭೆಗಳಿಂದ ಅಭ್ಯರ್ಥಿಗಳನ್ನು ಚುನಾಯಿಸಲಾಗುತ್ತದೆ. ಪ್ರತಿ ರಾಜ್ಯದಿಂದ ಎಷ್ಟು ಅಭ್ಯರ್ಥಿಗಳನ್ನು ರಾಜ್ಯಸಭೆಗೆ ನಿಗದಿ ಮಾಡಬೇಕು ಎಂಬುದನ್ನು ಆಯಾ ರಾಜ್ಯದ ಜನಸಂಖ್ಯೆ ಆಧರಿಸಿ ನಿರ್ಧರಿಸಲಾಗಿದೆ.
— ಸಣ್ಣ ರಾಜ್ಯಗಳಿಂದ ಕನಿಷ್ಠ ಒಬ್ಬ ಪ್ರತಿನಿಧಿಯಾದರೂ ಇರಬೇಕು ಎಂಬ ನಿಯಮ ಅಡಕವಾಗಿದೆ.


31. ಅಣುಶಕ್ತಿ ಚಾಲಿತ, ಅಣ್ವಸ್ತ್ರ ಸಜ್ಜಿತ ಕ್ಷಿಪಣಿಗಳನ್ನು ಉಡಾಯಿಸಬಲ್ಲ ಸಾಮರ್ಥ್ಯದ ಸಂಪೂರ್ಣ ದೇಶೀಯ ನಿರ್ಮಾಣದ ಮೊದಲ ಜಲಾಂತರ್ಗಾಮಿ 'ಐಎನ್‌ಎಸ್‌ ಅರಿಹಂತ್‌' ವಿನ್ಯಾಸದ ಮೂಲ ರಷ್ಯಾದ್ದು.


32. ಭಾರತೀಯ ಸಾಹಿತ್ಯ ಕ್ಷೇತ್ರದಲ್ಲಿ ನೀಡಲಾಗುವ ಅತ್ಯನ್ನುತ ಪ್ರಶಸ್ತಿ ಜ್ಞಾನಪೀಠ ಪ್ರಶಸ್ತಿ. ಇದು ಭಾರತೀಯ ಸಂವಿಧಾನದ 8ನೇ ಷೆಡ್ಯೂಲ್‌ನಲ್ಲಿ ಸೂಚಿತವಾಗಿರುವ ಭಾರತೀಯ ಭಾಷೆಗಳ ಲೇಖಕರಿಗೆ ಮಾತ್ರ ಈ ಪ್ರಶಸ್ತಿ ಮೀಸಲು.
— ಈವರೆಗೆ ಹಿಂದಿ ಭಾಷೆಯ 11 ಸಾಹಿತಿಗಳು ಜ್ಞಾನಪೀಠ ಪುರಸ್ಕೃತರಾಗಿದ್ದರೆ, ಕನ್ನಡ 8 ಸಾಹಿತಿಗಳು ಈ ಗೌರವಕ್ಕೆ ಪಾತ್ರರಾಗಿದ್ದು ಎರಡನೇ ಸ್ಥಾನದಲ್ಲಿದ್ದಾರೆ.
— ಈ ಪ್ರಶಸ್ತಿಯು ನಗದು ಜತೆಗೆ ಕಂಚಿನ ಸರಸ್ವತಿಯ ಕಂಚಿನ ಪ್ರತಿಕೃತಿ ಮತ್ತು ಫಲಕವನ್ನು ಒಳಗೊಂಡಿದೆ.


33. ಐಯುಸಿಎನ್ (IUCN) ಎಂಬ ವಿಶ್ವ ಸಂಸ್ಥೆಯು ಭಾಗವಾಗಿರುವ ಇಲಾಖೆಯಿಂದ ಮಾಹಿತಿ ಪಡೆದು, ವನ್ಯ ಜೀವಿಗಳ ಸಂತತಿ ಯಾವ ಪ್ರಮಾಣದಲ್ಲಿದೆ ಎಂಬುದನ್ನು ರೆಡ್ ಡೇಟಾ ಬುಕ್ ಎಂಬ ಪುಸ್ತಕದಲ್ಲಿ ಕೊಡುತ್ತಾರೆ.
— ನಮ್ಮ ದೇಶದಲ್ಲಿ ಇಂಡಿಯನ್ ಚೀತಾ ಪೂರ್ತಿಯಾಗಿ ಗತಿಸಿಹೋಗಿದೆ.
— ಅರುಣಾಚಲ ಪ್ರದೇಶದಲ್ಲಿನ ನಂದಪ ಹಾರುವ ಅಳಿಲುಗಳು, ಹಿಮಾಲಯದ ಭಾಗಗಳಲ್ಲಿ ಮಾತ್ರ ಕಂಡುಬರುವ ಪ್ರಪಂಚದ ಅತಿ ಚಿಕ್ಕ ಘೇಂಡಾಮೃಗಗಳಾದ ಸುಮಾತ್ರಾನ್ ಘೇಂಡಾಮೃಗಗಳು, ರಣಹದ್ದುಗಳು ಕೂಡ ಈಗ ಗತಿಸಿ ಹೋಗುವ ಸಾಧ್ಯತೆ (ಕ್ರಿಟಿಕಲಿ ಎಂಡೇಜರ್ಡ್) ಹೊಂದಿರುವ ಜೀವಿಗಳಾಗಿವೆ.


34. ಗ್ರೀನ್ ವಿಚ್ ಮೀನ್ ಟೈಮ್(GMT-Greenwich Mean Time) ಎನ್ನುವುದು ವಿವಿಧ ದೇಶಗಳಲ್ಲಿ ಸಮಯ ನಿರ್ಧಾರಣೆಗಾಗಿ ಅಂಗೀಕೃತ ಪ್ರಮಾಣಿತ ಸಮಯವಾಗಿದೆ. ಗ್ರೀನ್ ವಿಚ್ ಪ್ರಧಾನ ರೇಖಾಂಶದ ಪೂರ್ವಕ್ಕೆ ಇರುವ ದೇಶಗಳ ಸಮಯವು GMTಕ್ಕಿಂತ ಮುಂದಿರುತ್ತದೆ, ಹಾಗೆಯೇ ಗ್ರೀನ್ ವಿಚ್ ಪ್ರಧಾನ ರೇಖಾಂಶದ ಪಶ್ಚಿಮಕ್ಕೆ ಇರುವ ದೇಶಗಳು GMTಯ ಹಿಂದೆ ತಮ್ಮ ಪ್ರಮಾಣಿತ ಸಮಯವನ್ನು ಹೊಂದಿವೆ.
— 180° ರೇಖಾಂಶಕ್ಕೆ 'ಅಂತರಾಷ್ಟ್ರೀಯ ದಿನ ರೇಖೆ' ಎಂದು ಕರೆಯುತ್ತಾರೆ.
— ಬೇರಿಂಗ್ ಜಲಸಂಧಿಯು ಅಂತರಾಷ್ಟ್ರೀಯ ದಿನ ರೇಖೆಗೆ ಸಮೀಪವಿರುತ್ತದೆ.


35.  'ಜಿಪ್ಸಿಗಳು' (Gypsies) ಮಧ್ಯ ಏಷಿಯಾದಲ್ಲಿ ಕಂಡುಬರುವ ಒಂದು ಜನರ ಗುಂಪು. ಆದರೆ ಜಿಪ್ಸಿಗಳ ಮೂಲ ಮನೆ ಭಾರತದ (ಪಶ್ಚಿಮ ರಾಜಸ್ಥಾನ ಮತ್ತು ಪಂಜಾಬ್) ಪ್ರದೇಶದಲ್ಲಿದೆ.
– 'ಜಿಪ್ಸಿಗಳು' ಒಂದು ಜನಾಂಗೀಯ ಗುಂಪು (ethnic group) ಆಗಿದ್ದು, ಕೆಲವು ಅಜ್ಞಾತ ಕಾರಣಾಂತರಗಳಿಂದಾಗಿ ಮಧ್ಯಯುಗದ ಅಂತ್ಯದಲ್ಲಿ ಇವರು ಅಲೆದಾಡುವ ಜೀವನ ಶೈಲಿಗೆ ಒಗ್ಗಿಕೊಳ್ಳಬೇಕಾಯಿತು.


36. ಅಮೃತಸರದಿಂದ ದೆಹಲಿಯ ಮೂಲಕ ಕಲ್ಕತ್ತಾಕ್ಕೆ ಸಾಗುವ  ರಾಷ್ಟ್ರೀಯ ಹೆದ್ದಾರಿಯನ್ನು 'ರಾಷ್ಟ್ರೀಯ ಹೆದ್ದಾರಿ - 2' ಎಂದು ಕರೆಯಲಾಗುತ್ತದೆ. ಇದನ್ನು 'ಗ್ರ್ಯಾಂಡ್ ಟ್ರಂಕ್ ರಸ್ತೆ' (Grand Trunk Road) ಎಂದು ಕರೆಯಲಾಗುತ್ತಿತ್ತು ಮತ್ತು ಇದನ್ನು ಶೇರ್ ಷಾ ಸೂರಿಯು ನಿರ್ಮಿಸಿದನು.


37. ಉತ್ತರ-ಪಶ್ಚಿಮ ಬಯಲು ಪ್ರದೇಶ(north-western plains)ಗಳಲ್ಲಿ ತೀವ್ರವಾದ ಕಡಿಮೆ ಒತ್ತಡದ ಪಟ್ಟಿಗಳ ಕಾರಣದಿಂದಾಗಿ, ನೈಋತ್ಯ ಮಾನ್ಸೂನ್ ಮಾರುತವು ಭಾರತ ಉಪಖಂಡಕ್ಕೆ ಪ್ರವೇಶಿಸುತ್ತದೆ.
— ಇದು ಬಂಗಾಳ ಕೊಲ್ಲಿ ಮತ್ತು ಅರೇಬಿಯನ್ ಸಮುದ್ರದಿಂದ ಬೀಸುವುದು.


38. 52ನೇ ವಿಧಿಯು ಭಾರತಕ್ಕೆ ರಾಷ್ಟ್ರಪತಿ ಸ್ಥಾನವನ್ನು ಹೇಳಿದೆ. ಭಾರತದ ರಾಷ್ಟ್ರಪತಿಗಳು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ,


39. ವನ್ಯಜೀವಿಗಳ ಸಂರಕ್ಷಣೆಗೆಂದು ಕೇಂದ್ರ ಸರಕಾರ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅನ್ನು 1972ರಲ್ಲಿ ಜಾರಿ ಮಾಡಿತು. ಅದರಲ್ಲಿ 6 ಶೆಡ್ಯೂಲ್ ಗಳಿವೆ. ಯಾವ ಪ್ರಾಣಿಗಳು ಅಳಿವಿನ ಅಂಚಿನಲ್ಲಿವೆಯೋ ಅವೆಲ್ಲವನ್ನು ಶೆಡ್ಯೂಲ್ 1ರಲ್ಲಿ ತರಲಾಯಿತು. ಹುಲಿ, ಸಿಂಹ, ಘೇಂಡಾಮೃಗ, ಹುಲ್ಲೇಕರ ಇವೆಲ್ಲ ಶೆಡ್ಯೂಲ್ 1ರ ಅಡಿ ಬರುತ್ತದೆ.


40.  ಜಸ್ಟಿಸ್‌ ಎಂ.ಎನ್‌.ವೆಂಕಟಾಚಲಯ್ಯ ಕಮಿಷನ್‌: ಈ ಹಿಂದಿನ ಎನ್‌ಡಿಎ ಸರಕಾರ ಈ ಆಯೋಗವನ್ನು ನೇಮಕ ಮಾಡಿತ್ತು. ಕೊಲಿಜಿಯಮ್‌ ವ್ಯವಸ್ಥೆಗೆ ಬದಲಿಯಾಗಿ 'ನ್ಯಾಷನಲ್‌ ಜುಡಿಷಿಯಲ್‌ ಅಪಾಯಿಂಟ್‌ಮೆಂಟ್ಸ್‌ ಕಮಿಷನ್‌(ಎನ್‌ಜೆಎಸಿ)' ರಚನೆ ಬಗ್ಗೆ ಆಯೋಗ ಒಲವು ತೋರಿತ್ತು.
— ಈ ಆಯೋಗಕ್ಕೆ ಸಿಜೆಐ, ಇಬ್ಬರು ಅತ್ಯಂತ ಹಿರಿಯ ನ್ಯಾಯಮೂರ್ತಿಗಳು, ಕಾನೂನು ಸಚಿವರು ಹಾಗೂ ಸಿಜೆಐ ಜತೆ ಸಮಾಲೋಚಿಸಿ ರಾಷ್ಟ್ರಪತಿಯಿಂದ ನೇಮಕಗೊಳ್ಳುವ ಸಾರ್ವಜನಿಕ ವಲಯದ ಗಣ್ಯ ವ್ಯಕ್ತಿ ಸದಸ್ಯರಾಗಬೇಕು ಎಂದು ಅದು ಶಿಫಾರಸು ಮಾಡಿತ್ತು.

... ಮುಂದುವರೆಯುವುದು.

No comments:

Post a Comment