"ಮನುಷ್ಯ ದೀಪವಾದರೂ ಆಗಬೇಕು, ಕನ್ನಡಿಯಾದರೂ ಆಗಬೇಕು. ಒಂದು ಬೆಳಕನ್ನು ಕೊಡುತ್ತದೆ ಮತ್ತೊಂದು ಅದನ್ನು ಪ್ರತಿಬಿಂಬಿಸುತ್ತದೆ. ಪ್ರತಿಯೊಬ್ಬರೂ ದೀಪ ಆಗದೇ ಹೋಗಬಹುದು ಆದರೆ ಕನ್ನಡಿ ಆಗಬಲ್ಲರು. ತಿಳಿದಿರುವ ಜ್ಞಾನವನ್ನು ಮತ್ತೊಬ್ಬರಿಗೆ ಹಂಚುವುದೇ ಜೀವನ.."—ಅರಿಸ್ಟಾಟಲ್

Tuesday 20 February 2018

☀️ PART IV— ಐಎಎಸ್ / ಕೆಎಎಸ್ ಪರೀಕ್ಷಾ ತಯಾರಿ ಬಿಟ್ಸ್ (IAS/KAS Exam Preparation Notes Bits)

☀️ PART IV— ಐಎಎಸ್ / ಕೆಎಎಸ್ ಪರೀಕ್ಷಾ ತಯಾರಿ ಬಿಟ್ಸ್
(IAS/KAS Exam Preparation Notes Bits)
━━━━━━━━━━━━━━━━━━━━━━━━━━━━━━━━━━━━
★ ಐಎಎಸ್ / ಕೆಎಎಸ್ ಪರೀಕ್ಷಾ ತಯಾರಿ
(IAS / KAS exam preparation notes)

★ ಸಾಮಾನ್ಯ ಅಧ್ಯಯನ
(general studies)

...ಮುಂದುವರೆದ ಭಾಗ.

ಇಲ್ಲಿ ಹಂಚಿಕೊಂಡಿರುವ ಮಾಹಿತಿಯು ಹಲವಾರು ನಿಖರ, ನಂಬಲರ್ಹವಾದ, ನೈಜ್ಯ ಮಾಹಿತಿಗಳನ್ನೊಳಗೊಂಡ ಹಲವು ಮೂಲಗಳಿಂದ ಕಲೆಹಾಕಿರುವಂತಹವು. ಏನಾದರೂ ಬರಹದಲ್ಲಿ ತಪ್ಪುಗಳಿದ್ದಲ್ಲಿ ಕ್ಷಮಿಸಿ ಹಾಗೂ ನನ್ನ ಗಮನಕ್ಕೆ ತನ್ನಿ.
Gmail : yaseen7ash@gmail.com



41. 'ಕಿಶೆನ್ ಗಂಗಾ ನದಿ'ಯನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ 'ನೀಲಂ ನದಿ' ಎಂದು ಕರೆಯಲಾಗುತ್ತದೆ.
- ಗಂಗಾ ನದಿಯು ಉತ್ತರಾಖಂಡದ 'ಗಂಗೋತ್ರಿ ಹಿಮನದಿ'ಯಿಂದ ಹುಟ್ಟಿಕೊಂಡಿದೆ.
- ಮಧ್ಯಪ್ರದೇಶದ ಸಾತ್ಪುರಾದ ದಕ್ಷಿಣದ ಇಳಿಜಾರಿನ ಸಿಯೋನಿ ಜಿಲ್ಲೆಯ ಮುಂಡಾರಾ ಹಳ್ಳಿಯಿಂದ 12 ಕಿಮೀ ದೂರದಲ್ಲಿ 'ವೆನಗಂಗಾ ನದಿ'ಯು ಉಗಮಿಸುತ್ತದೆ.
- 'ಪೆನಗಂಗಾ ನದಿ'ಯು ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯಲ್ಲಿ ಕಂಡುಬರುತ್ತದೆ.



42. ಪ್ರಧಾನ ಮಂತ್ರಿ ಜೀವನ ವಿಮಾ ಯೋಜನೆಯು ಪ್ರತಿಯೊಬ್ಬ ಭಾರತೀಯನಿಗೂ ಜೀವ ವಿಮೆಯನ್ನು ಒದಗಿಸುವ ಉದ್ದೇಶವನ್ನು ಈ ವಿಮೆ ಹೊಂದಿದೆ. ಟರ್ಮ್ ವಿಮಾ ಯೋಜನೆಯ ಪ್ರಕಾರ ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆಯು 18-50 ವರ್ಷ ವಯಸ್ಸಿನ ಜನರಿಗೆ ಲಭ್ಯವಿರುತ್ತದೆ.
— ವಿಮಾದಾರ ಸ್ವಇಚ್ಛೆಯ ಪ್ರಕಾರ ಈ ಯೋಜನೆಯಿಂದ ಹೊರ ಹೋಗುವ ಅವಕಾಶವೂ ಇದೆ. ಭವಿಷ್ಯದಲ್ಲಿ ಯಾವಾಗಲಾದರೂ ಮತ್ತೆ ಈ ಪಾಲಿಸಿಯಲ್ಲಿ ಸೇರಿಕೊಳ್ಳಬಹುದು.
— ಈ ಸ್ಕೀಂನ ಪ್ರಕಾರ ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆ ಒಂದು ನವೀಕರಣ (renewal) ಮಾಡಬಹುದಾದ ಪಾಲಿಸಿಯಾಗಿದ್ದು, ಇದರಲ್ಲಿ ವಾರ್ಷಿಕ ಜೀವ ವಿಮಾ ರಕ್ಷಣೆ ರೂ. 2,00,000 ವನ್ನು ವಿಮಾದಾರನ ಮರಣದ ಸಂದರ್ಭದಲ್ಲಿ ಕೊಡಲಾಗುತ್ತದೆ. ಅತೀ ಕಡಿಮೆ ಅಂದರೆ ವಾರ್ಷಿಕ ರೂ. 330 ಪ್ರೀಮಿಯಂ ದರದಲ್ಲಿ ಇದನ್ನು ನೀಡಲಾಗುತ್ತದೆ.



43. ಬಿಟ್ ಕಾಯಿನ್ ಡಿಜಿಟಲ್ ಯುಗದ ಡಿಜಿಟಲ್ ಕರೆನ್ಸಿ. ಇದಕ್ಕೆ ಮುದ್ರಣ ರೂಪ ಇಲ್ಲ. ಅಲ್ಲದೇ ಇದಕ್ಕೆ ಯಾವುದೇ ದೇಶ, ಭಾಷೆ, ಬ್ಯಾಂಕು ಇದ್ಯಾವುದು ಇರುವುದಿಲ್ಲ.
— ಬಿಟ್ ಕಾಯಿನ್ ವಿಶ್ವದ ಯಾವುದೇ ಮೂಲದಿಂದ ಕೆಲವೇ ನಿಮಿಷಗಳಲ್ಲಿ ಕಳಿಸಲು ಅಥವಾ ಪಡೆಯಲು ಬಳಸಬಹುದು. ಉತ್ಪನ್ನ-ಸೇವೆಗಳನ್ನು ಪಡೆಯಲು ಇಲ್ಲವೇ ಷೇರು ಮತ್ತು ಚಿನ್ನದಲ್ಲಿ ಹೂಡಿಕೆ ಮಾಡಬಹುದು. ಆದರೆ ಈ ಪ್ರಕ್ರಿಯೆಗಳೇಲ್ಲ ಅಂತರ್ಜಾಲದ ಮೂಲಕ ಮಾತ್ರ ನಡೆಯುತ್ತದೆ.
— ಬಿಟ್ ಕಾಯಿನ್ ಭಾರತದಲ್ಲಿ ಕಾನೂನು ಬದ್ದವಾಗಿ ಚಲಾವಣೆಗೆ ತಂದಿಲ್ಲ. ಭಾರತೀಯ ರಿಸರ್ವ್ ಬ್ಯಾಂಕ್ ಇದರ ಒಳಿತು ಕೆಡುಕುಗಳ ಬಗ್ಗೆ ಗಮನ ಹರಿಸಿದೆ. ಬಿಟ್ ಕಾಯಿನ್ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯಿಂದ ನಿಯಂತ್ರಿಸಲ್ಪಡುವುದಿಲ್ಲ.



44. ಕಾಲಗಣನೆಗೆ ಸಂಬಂಧಿಸಿದ ಭಾರತದ ಪಂಚಾಂಗಗಳು ಸೂರ್ಯ–ಚಂದ್ರರ ತೋರಿಕೆಯ ಚಲನೆಯನ್ನು ಆಧರಿಸಿವೆ. ಈ ನಿಟ್ಟಿನಲ್ಲಿ ಮಕರ ಸಂಕ್ರಾಂತಿ ಹಬ್ಬದ ಆಚರಣೆಯೂ ಸೂರ್ಯನನ್ನು ಕುರಿತದ್ದೆ ಆಗಿದ್ದು ಮಕರ ‘ರಾಶಿ’ಗೆ ಅಥವಾ ನಕ್ಷತ್ರಪುಂಜಕ್ಕೆ (ಕೇಪ್ರಿಕಾರ್ನ್‍ಸ್ ಕಾನ್ಸ್ಟಲೇಷನ್) ಸೂರ್ಯನ ‘ಪ್ರವೇಶ’ವನ್ನು ಸೂಚಿಸಿ ಒಂದು ದೃಷ್ಟಿಯಿಂದ ಹೆಚ್ಚು ಬೆಳಕಿರುವ ದಿನಗಳ ಪ್ರಾರಂಭವನ್ನು (ಉತ್ತರಾಯಣ) ಸಾರುತ್ತದೆ.



45. ಸರ್ಕಾರವು ವನ್ಯಜೀವಿಗಳ ಸಂರಕ್ಷಣೆಗೆಂದು ಅಭಯಾರಣ್ಯ, ರಾಷ್ಟ್ರೀಯ ಉದ್ಯಾನಗಳನ್ನು ಮಾಡಿದೆ. ಅಭಯಾರಣ್ಯ, ರಾಷ್ಟ್ರೀಯ ಉದ್ಯಾನಗಳಿಗೆ ಇರುವ ವತ್ಯಾಸ ಏನೆಂದರೆ, ಅಭಯಾರಣ್ಯದಲ್ಲಿ ಮನುಷ್ಯರ ಯಾವುದೇ ಚಟುವಟಿಕೆಗೆ ಅನುಮತಿ ಇಲ್ಲ. ಸ್ಥಳೀಯರಿಗೂ ಕೂಡ ಇಲ್ಲಿ ನಿರ್ಬಂಧವಿರುತ್ತದೆ. ರಾಷ್ಟ್ರೀಯ ಉದ್ಯಾನಗಳಲ್ಲಿ ಸ್ಥಳೀಯರು ತಮ್ಮ ಚಟುವಟಿಕೆ ನಡೆಸಲು ಅನುಮತಿ ಇರುತ್ತದೆ.



46. ಗೋಲ್ಡ್ ಮಾನಿಟೈಸೇಶನ್ ಯೋಜನೆ ಎಂದರೆ ಚಿನ್ನವನ್ನು ಬಂಡವಾಳ ಅಥವಾ ಹೂಡಿಕೆ ರೂಪದಲ್ಲಿ ಬಳಕೆ ಮಾಡಿಕೊಳ್ಳಬಹುದು (ಚಿನ್ನದ ಪತ್ರಗಳನ್ನು ಹೊರತುಪಡಿಸಿ).
— ಸದ್ಯ ಭಾರತದಲ್ಲಿ (ಬಿಎಸ್ ಐ) 350 ಹಾಲ್ ಮಾರ್ಕಿಂಗ್ ಕೇಂದ್ರಗಳಿವೆ. ಚಿನ್ನದ ಆಭರಣದ ಪರಿಶುದ್ಧತೆಯನ್ನು ಇವೇ ನಿರ್ಧರಿಸುತ್ತಿವೆ.
— ಈ ಯೋಜನೆಯಲ್ಲಿ ಚಿನ್ನವನ್ನು ಪರೀಕ್ಷೆಗೆ ಒಳಪಡಿಸಲು ಕನಿಷ್ಠ 30 ಗ್ರಾಂ ಚಿನ್ನವನ್ನಾದರೂ ಹೊಂದಿರಬೇಕಾಗುತ್ತದೆ.
— ಎಕ್ಸ್ಆರ್ಎಫ್ ಯಂತ್ರದ ಮೂಲಕ ಚಿನ್ನದ ಪರಿಶುದ್ಧತೆಯ ಲೆಕ್ಕ ಮಾಡಲಾಗುತ್ತದೆ. ಚಿನ್ನ ಪರಿಶೀಲನೆ ಮಾಡಬೇಕಾದವರು ಕೆವೈಸಿ ಸೇರಿದಂತೆ ವಿವಿಧ ಮಾಹಿತಿಯನ್ನು ನೀಡಬೇಕಾಗುತ್ತದೆ.



47. ವುಡ್ಸ್ ವರದಿಯು (ವುಡ್ಸ್ ಡೆಸ್ಪ್ಯಾಚ್) ಭಾರತೀಯ ಶೈಕ್ಷಣಿಕ ವ್ಯವಸ್ಥೆಯಲ್ಲಿ ಅನುದಾನ-ನೆರವು ವ್ಯವಸ್ಥೆಯ ಮಂಜೂರಾತಿಯ ಕುರಿತು ಶಿಫಾರಸು ಮಾಡಿತು ಮತ್ತು ಶಾಲೆಗಳು ತಮ್ಮ ವಿದ್ಯಾರ್ಥಿಗಳಿಗೆ ಶುಲ್ಕ ವಿಧಿಸಬೇಕು ಎಂದು ವಾದಿಸಲಾಯಿತು.
— 1854 ರ ಡೆಸ್ಪ್ಯಾಚ್ನ ನಂತರ, ಬ್ರಿಟಿಷರು ಹಲವಾರು ಕ್ರಮಗಳನ್ನು ಪರಿಚಯಿಸಿದರು. ಶಿಕ್ಷಣದ ಎಲ್ಲ ವಿಷಯಗಳ ಮೇಲೆ ನಿಯಂತ್ರಣವನ್ನು ವಿಸ್ತರಿಸಲು ಸರಕಾರದ ಶಿಕ್ಷಣ ಇಲಾಖೆಗಳನ್ನು ಸ್ಥಾಪಿಸಲಾಯಿತು. ವಿಶ್ವವಿದ್ಯಾಲಯ ಶಿಕ್ಷಣ ವ್ಯವಸ್ಥೆಯನ್ನು ಸ್ಥಾಪಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಯಿತು.


48. ಪ್ರಮುಖ ಮಾರುತಗಳು :
– 'ಫೋಹ್ನ್'(Fohn) ಎಂಬುದು ಆಲ್ಪ್ಸ್ ಪ್ರದೇಶದಲ್ಲಿ ಬೀಸುವ ಬೆಚ್ಚಗಿನ ಮತ್ತು ಒಣ ಗಾಳಿಯಾಗಿದೆ.
– 'ಸುರ್ಮನ್'(Sarmun) ಎಂಬುದು ಕುರಿಸ್ತಾನ್ ಪ್ರದೇಶದ ಸ್ಥಳೀಯ ಮಾರುತವಾಗಿದೆ.
– 'ಸಾಂಟಾ ಅನಾ' (Santa Ana) ಎಂಬುದು ಕ್ಯಾಲಿಫೋರ್ನಿಯಾದ ಸ್ಥಳೀಯ ಗಾಳಿಯಾಗಿದೆ.  
– 'ಝೋಂಡಾ' (Zonda) ಎಂಬುದು ಅರ್ಜೆಂಟೈನಾದ ಸ್ಥಳೀಯ ಮಾರುತವಾಗಿದೆ.

.
49. ಭಾರತದ ಕೇಂದ್ರ ಲೋಕ ಸೇವಾ ಆಯೋಗದ ಅಧ್ಯಕ್ಷರನ್ನು ಮತ್ತು ಸದಸ್ಯರನ್ನು, ಮುಖ್ಯ ಚುನಾವಣಾ ಅಧಿಕಾರಿ ಮತ್ತು ಇತರೇ ಚುನಾವಣಾ ಅಧಿಕಾರಿ, ಮಹಾಲೆಕ್ಕಪತ್ರ ಪರಿಶೋಧಕ,  ಹಣಕಾಸು ಆಯೋಗದ ಅಧ್ಯಕ್ಷರು ಮತ್ತು ಸದಸ್ಯರನ್ನು,  ಅಂತರ್ ರಾಜ್ಯಗಳ ಸಮಿತಿ, ರಾಷ್ಟ್ರೀಯ ಪರಿಶಿಷ್ಟ ಜಾತಿ / ಪಂಗಡ ಮತ್ತು ಮಹಿಳಾ ಆಯೋಗಗಳ ಅಧ್ಯಕ್ಷರನ್ನು ಮತ್ತು ಸದಸ್ಯರನ್ನು ನೇಮಿಸುವುದು ಮತ್ತು ವಜಾ ಮಾಡುವ ಅಧಿಕಾರ ರಾಷ್ಟಪತಿಯವರಿಗಿದೆ.
— ಭಾರತದ ಅಟಾರ್ನಿ ಜನರಲ್‍ರನ್ನು ರಾಷ್ಟ್ರಪತಿ ನೇಮಕ ಮಾಡುವರು.
— ರಾಜ್ಯ ಲೋಕ ಸೇವಾ ಆಯೋಗದ ಅಧ್ಯಕ್ಷರನ್ನು ಮತ್ತು ಸದಸ್ಯರನ್ನು ವಜಾ ಮಾಡುವ ಅಧಿಕಾರ.
— ಸುಪ್ರಿಂ ಕೋರ್ಟಿನ ಮತ್ತು ಹೈ ಕೋರ್ಟಿನ ಮುಖ್ಯ ನಾಯಾಧೀಶರನ್ನು ಮತ್ತು ಇತರೇ ನ್ಯಾಯಾಧಿಶರನ್ನು ನೇಮಕ ಮಾಡುವುದು.
— ಭಾರತೀಯ ಸೇನಾ ಪಡೆಯ ಮುಖ್ಯ ಸೇನಾಪತಿ. ವಾಯಪಡೆಯ ಏರ್ ಮಾರ್ಷಲ್ ಮತ್ತು ನೌಕಾಪಡೆಯ ಅಡ್ಮಿರಲ್‍ರವರನ್ನು ರಾಷ್ಟ್ರಪತಿ ನೇಮಕ ಮಾಡುವರು.


50. ಸುಕನ್ಯಾ ಸಮೃದ್ಧಿ ಯೋಜನೆ ಯೋಜನೆಯ ಪ್ರಕಾರ ಒಂದು ಹಣಕಾಸು ವರ್ಷದ ಅವಧಿಯಲ್ಲಿ ಖಾತೆಯ ಒಟ್ಟು ಠೇವಣಿ ಮೊತ್ತ 1.5 ಲಕ್ಷ ದಾಟಬಾರದು. ಇದಕ್ಕಿಂತಲೂ ಹೆಚ್ಚಿನ ಮೊತ್ತಕ್ಕೆ ಯಾವುದೆ ಬಡ್ಡಿ ಇರುವುದಿಲ್ಲ. 1.5 ಲಕ್ಷಕ್ಕಿಂತ ಹೆಚ್ಚು ಇಟ್ಟಿರುವ ಮೊತ್ತವನ್ನು ಖಾತೆದಾರರು ಯಾವಾಗ ಬೇಕಾದರೂ ಹಿಂಪಡೆಯಬಹುದು.
— ಸರ್ಕಾರ ಈ ಖಾತೆಯ ಬಡ್ಡಿದರವನ್ನು ಕಾಲ ಕಾಲಕ್ಕೆ ನಿರ್ಧರಿಸಲಿದೆ ಹಾಗೂ ವಾರ್ಷಿಕವಾಗಿ ಇದನ್ನು ಪರಿಷ್ಕರಿಸಲಿದೆ. ಜತೆಗೆ ಖಾತೆಗೆ ಪಾವತಿಸಲಿದೆ. ಸರ್ಕಾರ ಪ್ರತಿ ತ್ರೈಮಾಸಿಕಕ್ಕೆ ಅನುಗುಣವಾಗಿ ಬಡ್ಡಿಯನ್ನು ಘೋಷಿಸಲಿದೆ. ವಾರ್ಷಿಕವಾಗಿ ಪ್ರಸ್ತುತ ತ್ರೈಮಾಸಿಕದ ಬಡ್ಡಿದರ ಶೇ. 8.4ರಷ್ಟು ಇದೆ.
— ಈ ಹಿಂದೆ ಠೇವಣಿಯನ್ನು 14ನೇ ವಯಸ್ಸಿನವರೆಗೆ ಮಾಡಿಸಬಹುದಾಗಿತ್ತು. ಆದರೆ ಈಗ ಇದನ್ನು 15ನೇ ವರ್ಷಕ್ಕೆ ಹೆಚ್ಚಿಸಲಾಗಿದೆ. ಮೊದಲಿಗೆ ವಾರ್ಷಿಕವಾಗಿ ಕನಿಷ್ಟ ಠೇವಣಿ 1000 ರೂಪಾಯಿಗಳಿದ್ದವು. ಜತೆಗೆ ಶೇ. 8.4ರಷ್ಟು ಬಡ್ಡಿದರ ಇದೆ. ಪ್ರಸ್ತುತ ಯಾವುದೇ ಕನಿಷ್ಟ ಠೇವಣಿ ಇಟ್ಟಿಲ್ಲ.

... ಮುಂದುವರೆಯುವುದು. 

No comments:

Post a Comment